8:43 PM Tuesday4 - August 2026
ಬ್ರೇಕಿಂಗ್ ನ್ಯೂಸ್
*ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು