2:36 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು