6:47 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು