2:59 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು