8:47 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣಪನಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ

03/09/2022, 22:33

ಚಿತ್ರ: ಕೀರ್ತಿ ಸಂತೋಷ್ ನಾಯಕ್
ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ಶ್ರೀದೇವರಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ನಡೆಯಿತು.


ಇದಕ್ಕೆ ಮುನ್ನ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು. ಮಧ್ಯಾಹ್ನದಲ್ಲಿ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ
ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು. ಸಂಜೆ 6.15ಕ್ಕೆ ದೀಪ ನಮಸ್ಕಾರ, 7ಗಂಟೆಗೆ ಪಾರ್ಥಸಾರಥಿ ದೇವರಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ನೆರವೇರಿತು. 8 ಗಂಟೆಗೆ ಮಹಾಪೂಜೆ ನಡೆಯಿತು.
ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು