11:05 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ತೇಲಿ ಬಂದ ಮರದ ಡಬ್ಬದಲ್ಲಿ ಹೆಣ್ಣು ಶಿಶು ಪತ್ತೆ: ಮಹಾಭಾರತದ ಕರ್ಣನ ಮಾದರಿಯಲ್ಲಿ ತೇಲಿ ಬಂದ ಮಗು!

18/06/2021, 07:24

ಲಕ್ನೊ: ಮಹಾಭಾರತದ ಕರ್ಣ ಶಿಶುವಿರುವಾಗ ಗಂಗೆಯಲ್ಲಿ ತೇಲಿ ಬಂದ ಕಥೆಯನ್ನು ನಾವು ಓದಿದ್ದೇವೆ. ಅಂತಹದ್ದೇ ಒಂದು ಘಟನೆ ಇದೀಗ ವರದಿಯಾಗಿದೆ. ಉತ್ತರ ಪ್ರದೇಶದ ಗಾಜೀಪುರದಲ್ಲಿ ಗಂಗಾ ನದಿ ನೀರಿನಲ್ಲಿ ತೇಲಿ ಬಂದ ಮರದ ಡಬ್ಬವೊಂದರಲ್ಲಿ ಹೆಣ್ಣುಮಗು ಪತ್ತೆಯಾಗಿದೆ.

ಸ್ಥಳೀಯ ಮೀನುಗಾರ ಗುಲ್ಲು ಚೌಧರಿ ಅವರು ಮಗುವನ್ನು ರಕ್ಷಿಸಿದ್ದಾರೆ.

ಮಗುವಿನ ಜತೆಗೆ ಪೆಟ್ಟಿಗೆಯೊಳಗೆ ಒಂದು ಪತ್ರವೂ ಇತ್ತು. ಅದರಲ್ಲಿ ದುರ್ಗಾ ಮಾತೆಯ ಚಿತ್ರ, ಜಾತಕ ಮತ್ತು ಅಗರಬತ್ತಿಯ ತುಂಡುಗಳಿದ್ದವು. ಪತ್ರದಲ್ಲಿ ಗಂಗೆಯ ಮಗುಳು ಅಂತ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

ಮೀನುಗಾರ ಚೌಧರಿ ಮಗುವನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಈ ಮಾಹಿತಿ ಪೊಲೀಸರಿಗೆ ತಿಳಿದು ಚೌದರಿ ಮನೆಗೆ ಆಗಮಿಸಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು