9:19 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ತೇಲಿ ಬಂದ ಮರದ ಡಬ್ಬದಲ್ಲಿ ಹೆಣ್ಣು ಶಿಶು ಪತ್ತೆ: ಮಹಾಭಾರತದ ಕರ್ಣನ ಮಾದರಿಯಲ್ಲಿ ತೇಲಿ ಬಂದ ಮಗು!

18/06/2021, 07:24

ಲಕ್ನೊ: ಮಹಾಭಾರತದ ಕರ್ಣ ಶಿಶುವಿರುವಾಗ ಗಂಗೆಯಲ್ಲಿ ತೇಲಿ ಬಂದ ಕಥೆಯನ್ನು ನಾವು ಓದಿದ್ದೇವೆ. ಅಂತಹದ್ದೇ ಒಂದು ಘಟನೆ ಇದೀಗ ವರದಿಯಾಗಿದೆ. ಉತ್ತರ ಪ್ರದೇಶದ ಗಾಜೀಪುರದಲ್ಲಿ ಗಂಗಾ ನದಿ ನೀರಿನಲ್ಲಿ ತೇಲಿ ಬಂದ ಮರದ ಡಬ್ಬವೊಂದರಲ್ಲಿ ಹೆಣ್ಣುಮಗು ಪತ್ತೆಯಾಗಿದೆ.

ಸ್ಥಳೀಯ ಮೀನುಗಾರ ಗುಲ್ಲು ಚೌಧರಿ ಅವರು ಮಗುವನ್ನು ರಕ್ಷಿಸಿದ್ದಾರೆ.

ಮಗುವಿನ ಜತೆಗೆ ಪೆಟ್ಟಿಗೆಯೊಳಗೆ ಒಂದು ಪತ್ರವೂ ಇತ್ತು. ಅದರಲ್ಲಿ ದುರ್ಗಾ ಮಾತೆಯ ಚಿತ್ರ, ಜಾತಕ ಮತ್ತು ಅಗರಬತ್ತಿಯ ತುಂಡುಗಳಿದ್ದವು. ಪತ್ರದಲ್ಲಿ ಗಂಗೆಯ ಮಗುಳು ಅಂತ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

ಮೀನುಗಾರ ಚೌಧರಿ ಮಗುವನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಈ ಮಾಹಿತಿ ಪೊಲೀಸರಿಗೆ ತಿಳಿದು ಚೌದರಿ ಮನೆಗೆ ಆಗಮಿಸಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು