1:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು