8:25 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಗಂಗಾವತಿ: ಹಿರೇಜಂತಕಲ್ ನಲ್ಲಿ ಅಂತಾರಾಷ್ಟ್ರೀಯ ಬಾಲೆಯರ ದಿನಾಚರಣೆ

15/10/2022, 10:20

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka gmail.com

ಗಂಗಾವತಿ ತಾಲೂಕು ಹಿರೇಜಂತಕಲ್ಲು ಗ್ರಾಮದ ಕೂಡ್ಲಿಗಿ ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ,ಇವರಿಂದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಯುಕ್ತ ಗ್ರಾಮದ ಶ್ರೀ ದ್ಯಾವಮ್ಮನ ದೇವಸ್ಥಾನದಲ್ಲಿ, ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡ್ಲಿಗಿ ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ್ ಅಧ್ಯಕ್ಷೆ ಡಾ.ಆರ್.ಈರಮ್ಮ ವಹಿಸಿಕೊಂಡಿದ್ದರು.

ಪುಟ್ಟ ಪುಟ್ಟ ಬಾಲಕಿಯರು ನಮ್ಮ ದೇಶದ ನಮ್ಮ ಕರ್ನಾಟಕದ ಕ್ರಾಂತಿಕಾರಿ ಹೋರಾಟಗಾರರ ಹಾಗೂ ಗಣ್ಯಮಾನ್ಯರ ಮತ್ತು ಸಮಾಜ ಸುಧಾರಕರ ವೇಷದಲ್ಲಿ ಕಾಣಿಸಿಕೊಂಡು. ಕಾರ್ಯಕ್ರಮನ್ನು ಪುಟ್ಟ ಹೆಣ್ಣು ಮಕ್ಕಳಾದ ಸಾನ್ವಿ, ಆದ್ಯ, ಸನ್ನಿಧಿ, ಸಿಂಚನಾ,ಶಿವಾನಿ, ಪ್ರಿಯದರ್ಶಿನಿ, ಯಣ್ ಆದಿತ್ಯ ಮುಂತಾದ ಬಾಲಕಿಯರು ಕೇಕ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಈರಮ್ಮ ಮಾತನಾಡಿ, ಹೆಣ್ಣು ದೇಶದ ಕಣ್ಣು ಈ ದೇಶದ ಆಸ್ತಿಯಾಗಿದ್ದರು. ಪ್ರತಿಯೊಬ್ಬರೂ ಹೆಣ್ಣು ಮಕ್ಕಳನ್ನು ಗೌರವಿಸಿ, ಹೆಣ್ಣು ಮಕ್ಕಳಿಗೆ ಉತ್ತಮ
ಶಿಕ್ಷಣ ನೀಡಬೇಕಿದೆ. ಹೆಣ್ಣು ಮಕ್ಕಳು ಯಾವುದರಲ್ಲೂ ಕಡಿಮೆಯಿಲ್ಲ, ಎಲ್ಲಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಬೆಳೆಯಬೇಕು ಬೆಳೆಸಬೇಕು ಎಂದು ಈರಮ್ಮ ಕೋರಿದರು.

ಈ ಮೂಲಕ ಅವರು ಮಹಿಳೆಯರಲ್ಲಿ ಜಾಗೃತಿ ಮೂಡಿಸಿದರು,ಹಾಗೆ ಪುಟ್ಟ ಮಕ್ಕಳಿಗೆ ಪುಸ್ತಕ,ಪೆನ್ನು,ಜಾಮಿಟ್ರಿ ಬಾಕ್ಸ್ ವಿತರಿಸಿದರು. ಮಹಿಳಾ ಮಹಿಳಾ ಸಂಘದವರಾದ ಈರಮ್ಮ, ಗಂಗಾವತಿ ಮಲ್ಲಮ್ಮ, ಲಕ್ಷ್ಮಿದೇವಿ, ಸುನೀತಾ,ಈರಮ್ಮ, ರತ್ನ,ಸುನೀತಾ, ಗಂಗಮ್ಮ, ರೇಖಾ, ಶಾರದಾ, ಶಕುಂತಲಾ, ರತ್ನಮ್ಮ, ಜಯಮ್ಮ, ಮರಿಯಮ್ಮ, ತಾಯಮ್ಮ, ಗೌರಮ್ಮ, ಉಮಾದೇವಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. ಗಂಗಾವತಿ ಈರಮ್ಮ ಸ್ವಾಗತಿಸಿ ನಿರ್ವಹಿಸಿದರು,ಮಲ್ಲಮ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು