8:32 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಗಂಗಾವತಿ: ಹಿರೇಜಂತಕಲ್ ನಲ್ಲಿ ಅಂತಾರಾಷ್ಟ್ರೀಯ ಬಾಲೆಯರ ದಿನಾಚರಣೆ

15/10/2022, 10:20

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka gmail.com

ಗಂಗಾವತಿ ತಾಲೂಕು ಹಿರೇಜಂತಕಲ್ಲು ಗ್ರಾಮದ ಕೂಡ್ಲಿಗಿ ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ,ಇವರಿಂದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಯುಕ್ತ ಗ್ರಾಮದ ಶ್ರೀ ದ್ಯಾವಮ್ಮನ ದೇವಸ್ಥಾನದಲ್ಲಿ, ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡ್ಲಿಗಿ ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ್ ಅಧ್ಯಕ್ಷೆ ಡಾ.ಆರ್.ಈರಮ್ಮ ವಹಿಸಿಕೊಂಡಿದ್ದರು.

ಪುಟ್ಟ ಪುಟ್ಟ ಬಾಲಕಿಯರು ನಮ್ಮ ದೇಶದ ನಮ್ಮ ಕರ್ನಾಟಕದ ಕ್ರಾಂತಿಕಾರಿ ಹೋರಾಟಗಾರರ ಹಾಗೂ ಗಣ್ಯಮಾನ್ಯರ ಮತ್ತು ಸಮಾಜ ಸುಧಾರಕರ ವೇಷದಲ್ಲಿ ಕಾಣಿಸಿಕೊಂಡು. ಕಾರ್ಯಕ್ರಮನ್ನು ಪುಟ್ಟ ಹೆಣ್ಣು ಮಕ್ಕಳಾದ ಸಾನ್ವಿ, ಆದ್ಯ, ಸನ್ನಿಧಿ, ಸಿಂಚನಾ,ಶಿವಾನಿ, ಪ್ರಿಯದರ್ಶಿನಿ, ಯಣ್ ಆದಿತ್ಯ ಮುಂತಾದ ಬಾಲಕಿಯರು ಕೇಕ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಈರಮ್ಮ ಮಾತನಾಡಿ, ಹೆಣ್ಣು ದೇಶದ ಕಣ್ಣು ಈ ದೇಶದ ಆಸ್ತಿಯಾಗಿದ್ದರು. ಪ್ರತಿಯೊಬ್ಬರೂ ಹೆಣ್ಣು ಮಕ್ಕಳನ್ನು ಗೌರವಿಸಿ, ಹೆಣ್ಣು ಮಕ್ಕಳಿಗೆ ಉತ್ತಮ
ಶಿಕ್ಷಣ ನೀಡಬೇಕಿದೆ. ಹೆಣ್ಣು ಮಕ್ಕಳು ಯಾವುದರಲ್ಲೂ ಕಡಿಮೆಯಿಲ್ಲ, ಎಲ್ಲಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಬೆಳೆಯಬೇಕು ಬೆಳೆಸಬೇಕು ಎಂದು ಈರಮ್ಮ ಕೋರಿದರು.

ಈ ಮೂಲಕ ಅವರು ಮಹಿಳೆಯರಲ್ಲಿ ಜಾಗೃತಿ ಮೂಡಿಸಿದರು,ಹಾಗೆ ಪುಟ್ಟ ಮಕ್ಕಳಿಗೆ ಪುಸ್ತಕ,ಪೆನ್ನು,ಜಾಮಿಟ್ರಿ ಬಾಕ್ಸ್ ವಿತರಿಸಿದರು. ಮಹಿಳಾ ಮಹಿಳಾ ಸಂಘದವರಾದ ಈರಮ್ಮ, ಗಂಗಾವತಿ ಮಲ್ಲಮ್ಮ, ಲಕ್ಷ್ಮಿದೇವಿ, ಸುನೀತಾ,ಈರಮ್ಮ, ರತ್ನ,ಸುನೀತಾ, ಗಂಗಮ್ಮ, ರೇಖಾ, ಶಾರದಾ, ಶಕುಂತಲಾ, ರತ್ನಮ್ಮ, ಜಯಮ್ಮ, ಮರಿಯಮ್ಮ, ತಾಯಮ್ಮ, ಗೌರಮ್ಮ, ಉಮಾದೇವಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. ಗಂಗಾವತಿ ಈರಮ್ಮ ಸ್ವಾಗತಿಸಿ ನಿರ್ವಹಿಸಿದರು,ಮಲ್ಲಮ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು