3:14 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್ ಪಳನಿಯಪ್ಪನ್

11/11/2024, 20:21

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.ಕಂ

ಸಂಡೂರನ್ನು ಅಕ್ರಮ ಗಣಿಗಾರಿಕೆ ಮಫಿಯಾ, ಶಸ್ತ್ರಾಸ್ತ್ರ ಮತ್ತು ಹಣದ ಶಕ್ತಿಯಿಂದ ರಕ್ಷಿಸಲು, ಸುಳ್ಳು ಪ್ರಚಾರದ ನೀತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಕಲ್ಯಾಣ ಕರ್ನಾಟದ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಮೂರು ಉಪ ಚುನಾವಣೆಗಳಲ್ಲಿ ಜಯಗಳಿಸಲಿದೆ ಮತ್ತು ಸಂಡೂರಿನಲ್ಲಿ ಮುನ್ನಡೆಯೊಂದಿಗೆ ಗೆಲ್ಲಲಿದೆ. ಏಕೆಂದರೆ ಇದು ಕಾಂಗ್ರೆಸ್ ಶಕ್ತಿಯುತ ಹಾಗೂ ಪರಂಪರೆಯ ಬೀಡಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಕಾಂಗ್ರೆಸ್ 371(J) ಧಾರೆಯನ್ನು ಅನುಷ್ಠಾನಗೊಳಿಸಿದ್ದು, ಇದು ಜನರ ಪ್ರಯೋಜನಕ್ಕಾಗಿ ಎತ್ತಿದ ಮಹತ್ವದ ನಿರ್ಧಾರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ತುಂಗಭದ್ರಾ ಅಣೆಕಟ್ಟನ್ನು ನಿರ್ಮಿಸಿದೆ ಮತ್ತು ಕರ್ನಾಟಕದಲ್ಲಿ ವಿವಿಧ ಅಣೆಕಟ್ಟುಗಳನ್ನು ನಿರ್ಮಿಸಿದ್ದು, ಇದು ರೈತರು ಮತ್ತು ಬಡವರ ಜೀವನೋಪಾಯಕ್ಕೆ ಮೂಲವಾಗಿದೆ.
ಕಾಂಗ್ರೆಸ್ ನೀಡಿದ ಐದು ಖಾತರಿಯು ಬಡ ಮತ್ತು ನೈರಾಶ್ಯಕ್ಕೆ ಒಳಗಾದ ಜನರನ್ನು ಬಡತನ ರೇಖೆಯಿಂದ ಮೇಲೇಳಲು ಸಹಾಯ ಮಾಡುತ್ತಿದೆ, ಇದು ವಾರ್ಷಿಕ 56,000 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು