12:37 PM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್ ಪಳನಿಯಪ್ಪನ್

11/11/2024, 20:21

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.ಕಂ

ಸಂಡೂರನ್ನು ಅಕ್ರಮ ಗಣಿಗಾರಿಕೆ ಮಫಿಯಾ, ಶಸ್ತ್ರಾಸ್ತ್ರ ಮತ್ತು ಹಣದ ಶಕ್ತಿಯಿಂದ ರಕ್ಷಿಸಲು, ಸುಳ್ಳು ಪ್ರಚಾರದ ನೀತಿಗಳಿಂದ ರಕ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಕಲ್ಯಾಣ ಕರ್ನಾಟದ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಮೂರು ಉಪ ಚುನಾವಣೆಗಳಲ್ಲಿ ಜಯಗಳಿಸಲಿದೆ ಮತ್ತು ಸಂಡೂರಿನಲ್ಲಿ ಮುನ್ನಡೆಯೊಂದಿಗೆ ಗೆಲ್ಲಲಿದೆ. ಏಕೆಂದರೆ ಇದು ಕಾಂಗ್ರೆಸ್ ಶಕ್ತಿಯುತ ಹಾಗೂ ಪರಂಪರೆಯ ಬೀಡಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಕಾಂಗ್ರೆಸ್ 371(J) ಧಾರೆಯನ್ನು ಅನುಷ್ಠಾನಗೊಳಿಸಿದ್ದು, ಇದು ಜನರ ಪ್ರಯೋಜನಕ್ಕಾಗಿ ಎತ್ತಿದ ಮಹತ್ವದ ನಿರ್ಧಾರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ತುಂಗಭದ್ರಾ ಅಣೆಕಟ್ಟನ್ನು ನಿರ್ಮಿಸಿದೆ ಮತ್ತು ಕರ್ನಾಟಕದಲ್ಲಿ ವಿವಿಧ ಅಣೆಕಟ್ಟುಗಳನ್ನು ನಿರ್ಮಿಸಿದ್ದು, ಇದು ರೈತರು ಮತ್ತು ಬಡವರ ಜೀವನೋಪಾಯಕ್ಕೆ ಮೂಲವಾಗಿದೆ.
ಕಾಂಗ್ರೆಸ್ ನೀಡಿದ ಐದು ಖಾತರಿಯು ಬಡ ಮತ್ತು ನೈರಾಶ್ಯಕ್ಕೆ ಒಳಗಾದ ಜನರನ್ನು ಬಡತನ ರೇಖೆಯಿಂದ ಮೇಲೇಳಲು ಸಹಾಯ ಮಾಡುತ್ತಿದೆ, ಇದು ವಾರ್ಷಿಕ 56,000 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು