5:45 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

11/01/2025, 00:00

ನವದೆಹಲಿ(reporterkarnataka.com): ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.


ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಂಡರು.
ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ.
ಮುಖ್ಯವಾಗಿ 2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.
ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್ ಅವರು, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು