5:52 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಗೋವಾ- ಕರ್ನಾಟಕ ಸಂಪರ್ಕಿಸುವ ಕಾಳಿ ನದಿ ಹಳೆ ಸೇತುವೆ ಕುಸಿತ: ಟ್ರಕ್ ಚಾಲಕನಿಗೆ ಗಾಯ; ತಪ್ಪಿದ ಬಹು ದೊಡ್ಡ ದುರಂತ

07/08/2024, 23:09

ಕಾರವಾರ(reporterkarnataka.com): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದಾಶಿವಗಡದಿಂದ ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ಹಳೆ ಕಾಳಿ ಸೇತುವೆ ಕುಸಿದು ಬಿದ್ದು ಓರ್ವ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಭೂಕುಸಿತ ಮತ್ತು ಮಳೆ ಹಾನಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವಾಗಲೇ, ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾಳಿ ನದಿಗೆ ಅಡ್ಡಲಾಗಿರುವ 40 ವರ್ಷಗಳ ಹಳೆಯ ಸೇತುವೆ ಕುಸಿದಿದ್ದು, ಟ್ರಕ್ ಚಾಲಕ ಗಾಯಗೊಂಡಿದ್ದಾರೆ.
ಬುಧವಾರ ನಸುಕಿನ 1 ಗಂಟೆ ಸುಮಾರಿಗೆ ಟ್ರಕ್ ಸೇತುವೆ ಮೇಲೆ ಹಾದು ಹೋಗುತ್ತಿದ್ದಾಗ ಸೇತುವೆ ಕುಸಿದಿದೆ. ಟ್ರಕ್ ಕಾರವಾರದ ಮಾರ್ಗವಾಗಿ ಮನೆಗೆ ಹೋಗುತ್ತಿದ್ದಾಗ ನದಿಗೆ ಅಡ್ಡಲಾಗಿ ಸೇತುವೆಯ ಹೆಚ್ಚಿನ ಭಾಗವು ನೀರಿನಲ್ಲಿ ಬಿದ್ದಿತು. ರಾತ್ರಿ ಗಸ್ತು ಸಿಬ್ಬಂದಿ ಘಟನೆಯನ್ನು ಗಮನಿಸಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


“ಚಿತ್ತಾಕುಲ ಪೊಲೀಸ್ ಠಾಣೆ  ರಾತ್ರಿ ಗಸ್ತು ತಿರುಗುತ್ತಿದ್ದವರು ಸೇತುವೆ ಕುಸಿದಿರುವುದನ್ನು ಗಮನಿಸಿ ನಿಯಂತ್ರಣ ಕೊಠಡಿಗೆ ಎಚ್ಚರಿಕೆ ನೀಡಿದರು. ನದಿಯಲ್ಲಿ ಟ್ರಕ್ ಇತ್ತು ಮತ್ತು ಗಾಯಗೊಂಡ ವ್ಯಕ್ತಿ ಅದರ ಮೇಲಿದ್ದರು. ಸ್ಥಳೀಯ ಮೀನುಗಾರರು ತಮಿಳುನಾಡಿನ ಬಾಲ ಮುರುಗನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ರಕ್ಷಿಸಿದರು. ಅವರು ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೆದ್ದಾರಿಯಲ್ಲಿ ಸಂಚಾರವನ್ನು ನಿಲ್ಲಿಸಲಾಗಿದೆ ಮತ್ತು ತಿರುವು ಮಾರ್ಗವನ್ನು ಸೂಚಿಸಲಾಗಿದೆ.
ಚಾಲಕ ಗಾಯಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಗಜಾನನ ನಾಯ್ಕ ತಿಳಿಸಿದ್ದಾರೆ.
ಈ ಸೇತುವೆಯನ್ನು ಕಾಳಿ ನದಿಯ ಮುಖಾಂತರ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು