6:03 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಗೋವಾ- ಕರ್ನಾಟಕ ಸಂಪರ್ಕಿಸುವ ಕಾಳಿ ನದಿ ಹಳೆ ಸೇತುವೆ ಕುಸಿತ: ಟ್ರಕ್ ಚಾಲಕನಿಗೆ ಗಾಯ; ತಪ್ಪಿದ ಬಹು ದೊಡ್ಡ ದುರಂತ

07/08/2024, 23:09

ಕಾರವಾರ(reporterkarnataka.com): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದಾಶಿವಗಡದಿಂದ ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ಹಳೆ ಕಾಳಿ ಸೇತುವೆ ಕುಸಿದು ಬಿದ್ದು ಓರ್ವ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಭೂಕುಸಿತ ಮತ್ತು ಮಳೆ ಹಾನಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವಾಗಲೇ, ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾಳಿ ನದಿಗೆ ಅಡ್ಡಲಾಗಿರುವ 40 ವರ್ಷಗಳ ಹಳೆಯ ಸೇತುವೆ ಕುಸಿದಿದ್ದು, ಟ್ರಕ್ ಚಾಲಕ ಗಾಯಗೊಂಡಿದ್ದಾರೆ.
ಬುಧವಾರ ನಸುಕಿನ 1 ಗಂಟೆ ಸುಮಾರಿಗೆ ಟ್ರಕ್ ಸೇತುವೆ ಮೇಲೆ ಹಾದು ಹೋಗುತ್ತಿದ್ದಾಗ ಸೇತುವೆ ಕುಸಿದಿದೆ. ಟ್ರಕ್ ಕಾರವಾರದ ಮಾರ್ಗವಾಗಿ ಮನೆಗೆ ಹೋಗುತ್ತಿದ್ದಾಗ ನದಿಗೆ ಅಡ್ಡಲಾಗಿ ಸೇತುವೆಯ ಹೆಚ್ಚಿನ ಭಾಗವು ನೀರಿನಲ್ಲಿ ಬಿದ್ದಿತು. ರಾತ್ರಿ ಗಸ್ತು ಸಿಬ್ಬಂದಿ ಘಟನೆಯನ್ನು ಗಮನಿಸಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


“ಚಿತ್ತಾಕುಲ ಪೊಲೀಸ್ ಠಾಣೆ  ರಾತ್ರಿ ಗಸ್ತು ತಿರುಗುತ್ತಿದ್ದವರು ಸೇತುವೆ ಕುಸಿದಿರುವುದನ್ನು ಗಮನಿಸಿ ನಿಯಂತ್ರಣ ಕೊಠಡಿಗೆ ಎಚ್ಚರಿಕೆ ನೀಡಿದರು. ನದಿಯಲ್ಲಿ ಟ್ರಕ್ ಇತ್ತು ಮತ್ತು ಗಾಯಗೊಂಡ ವ್ಯಕ್ತಿ ಅದರ ಮೇಲಿದ್ದರು. ಸ್ಥಳೀಯ ಮೀನುಗಾರರು ತಮಿಳುನಾಡಿನ ಬಾಲ ಮುರುಗನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ರಕ್ಷಿಸಿದರು. ಅವರು ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೆದ್ದಾರಿಯಲ್ಲಿ ಸಂಚಾರವನ್ನು ನಿಲ್ಲಿಸಲಾಗಿದೆ ಮತ್ತು ತಿರುವು ಮಾರ್ಗವನ್ನು ಸೂಚಿಸಲಾಗಿದೆ.
ಚಾಲಕ ಗಾಯಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಗಜಾನನ ನಾಯ್ಕ ತಿಳಿಸಿದ್ದಾರೆ.
ಈ ಸೇತುವೆಯನ್ನು ಕಾಳಿ ನದಿಯ ಮುಖಾಂತರ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು