8:36 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ಗ್ಯಾರೆಂಟಿ ಯೋಜನೆಗಳು ಬಡವರ ಪಾಲಿಗೆ ಸಹಕಾರಿ: ಸಚಿವ ದಿನೇಶ್ ಗುಂಡೂರಾವ್

16/01/2025, 18:55

ಬೆಂಗಳೂರು(reporterkarnataka.com): ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಶಾಸಕರ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಭೆ ಜರುಗಿತು.
ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮೇಶ್ ಬಾಬು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕುಟುಂಬ ಇಲಾಖೆ, ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ ಮತ್ತು ಬಿಟಿಎಸ್, ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಚಿವ ದಿನೇಶ್ ಗುಂಡೂರಾವ್* ಮಾತನಾಡಿ, ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದೆ. ಯೋಜನೆಯ ಲಾಭ ಎಷ್ಟು ಜನರಿಗೆ ಸದುಪಯೋಗ ವಾಗುತ್ತಿದೆ ಮತ್ತು ಇದರಲ್ಲಿ ಬಡವರು, ಮಧ್ಯಮವರ್ಗದವರು ಎಷ್ಟು ಜನರು ಇದ್ದಾರೆ ಎಂದು ಪರಿಶೀಲನೆ ಮಾಡಬೇಕು.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಯೋಜನೆಯ ಲಾಭ ಸಾವಿರಾರು ಕುಟುಂಬಗಳಿಗೆ ಯೋಜನೆ ಲಾಭ ತಲುಪಿದೆ ಎಂದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಸ್ಲಂ ಪ್ರದೇಶದ ವಾಸ ಮಾಡುವ ಕಡೆಗಳಲ್ಲಿ ಗೃಹಜ್ಯೋತಿ ಯೋಜನೆ ಬಳಕೆದಾರರು ಶೇಕಡ 90%ರಷ್ಟು ಇದ್ದಾರೆ.
ಆಹಾರ ಇಲಾಖೆಯಿಂದ ಬಡವರ ಮನೆಗಳಿಗೆ ಖುದ್ದಾಗಿ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ ಇದರಿಂದ ದುರುಪಯೋಗ ಕಡಿಮೆಯಾಗುತ್ತಿದೆ.
ಹಸಿವಿನಿಂದ ಯಾರು ಮಲಗಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ಅಕ್ಷಯಪಾತ್ರೆಯಾಗಿದೆ.
ಯುವತಿಯರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಸ್ವಾವಲಂಬಿ ಬದುಕು ಸಾಗಿಸಲು ಅನುಕೂಲವಾಗಿದೆ.


ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಹೊಸ ಫಲಾನುಭವಿಗಳಿಗೆ ಗುರುತಿಸಿ ಯೋಜನೆ ಲಾಭ ತಲುಪುವಂತೆ ಮತ್ತು ಫಲಾನುಭವಿಗಳಿಗೆ ಸರಿಯಾಗಿ ಯೋಜನೆ ಲಾಭ ತಲುಪುತಿದ್ದಿಯ ಎಂದು ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಶ್ರೀನಿವಾಸಮೂರ್ತಿ, ಸರವಣನ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಓಂಪ್ರಕಾಶ್, ಭಾಗಲಕ್ಷ್ಮಿ, ಅಮರ್ ನಾಥ್ ವಿ., ಮತ್ತು ಕುಮಾರಿ,ಮಾಧುರಿ, ಸೈಯದ್, ಸಲಾವುದ್ದೀನ್, ಮಹೇಶ್ ಜಿ, ದೀಪ, ರೇಖಾ, ಶೇಖರ್, ದರ್ಶನ್ ನಟರಾಜ್, ಮಹೇಶ್ವರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು