4:50 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು

01/01/2025, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌.
ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ್ರಿಂದ ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಶೇ.100ಕ್ಕೆ 100ರಷ್ಟು ಸಟ್ಟು ಕರಕಲಾಗಿ ಇಡೀ ಗುಡಿಸಲಿದ್ದ ಜಾಗವೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಇಂದು ಸ್ವತಃ ತಾನೇ ಅಡುಗೆ ಮಾಡಿ ಬೆಳಗ್ಗೆ ಊಟ ಮಾಡಿ ಮಧ್ಯಾಹ್ನದ ಊಟಕ್ಕೂ ಬಾಕ್ಸ್ ತೆಗೆದುಕೊಂಡು ಹೋಗಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸಿಲಿಂಡರ್ ಸಿಡಿದು ಇಡೀ ಗುಡಿಸಲೇ ಸರ್ವನಾಶವಾಗಿದೆ. ಒಂದು ವೇಳೆ ಸಿಲಿಂಡರ್ ಸ್ಫೋಟಗೊಳ್ಳುವ ವೇಳೆ ಗುಡಿಸಲು ಹಾಗೂ ಅಕ್ಕಪಕ್ಕ ಯಾರಾದರೂ ಇದ್ದಿದ್ದರೆ ಜೀವಹಾನಿಯೇ ಸಂಭವಿಸುತ್ತಿತ್ತು. ಆದರೆ, ಮಧ್ಯಾಹ್ನದ ವೇಳೆ ಆಗಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾದಂತಾಗಿದೆ. ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸ್ಸಯ್ಯ ಹಿರೇಮಠ್ ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕುಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು