1:20 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು

01/01/2025, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌.
ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ್ರಿಂದ ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಶೇ.100ಕ್ಕೆ 100ರಷ್ಟು ಸಟ್ಟು ಕರಕಲಾಗಿ ಇಡೀ ಗುಡಿಸಲಿದ್ದ ಜಾಗವೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಇಂದು ಸ್ವತಃ ತಾನೇ ಅಡುಗೆ ಮಾಡಿ ಬೆಳಗ್ಗೆ ಊಟ ಮಾಡಿ ಮಧ್ಯಾಹ್ನದ ಊಟಕ್ಕೂ ಬಾಕ್ಸ್ ತೆಗೆದುಕೊಂಡು ಹೋಗಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸಿಲಿಂಡರ್ ಸಿಡಿದು ಇಡೀ ಗುಡಿಸಲೇ ಸರ್ವನಾಶವಾಗಿದೆ. ಒಂದು ವೇಳೆ ಸಿಲಿಂಡರ್ ಸ್ಫೋಟಗೊಳ್ಳುವ ವೇಳೆ ಗುಡಿಸಲು ಹಾಗೂ ಅಕ್ಕಪಕ್ಕ ಯಾರಾದರೂ ಇದ್ದಿದ್ದರೆ ಜೀವಹಾನಿಯೇ ಸಂಭವಿಸುತ್ತಿತ್ತು. ಆದರೆ, ಮಧ್ಯಾಹ್ನದ ವೇಳೆ ಆಗಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾದಂತಾಗಿದೆ. ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸ್ಸಯ್ಯ ಹಿರೇಮಠ್ ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕುಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು