2:53 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು

01/01/2025, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌.
ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ್ರಿಂದ ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಶೇ.100ಕ್ಕೆ 100ರಷ್ಟು ಸಟ್ಟು ಕರಕಲಾಗಿ ಇಡೀ ಗುಡಿಸಲಿದ್ದ ಜಾಗವೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಇಂದು ಸ್ವತಃ ತಾನೇ ಅಡುಗೆ ಮಾಡಿ ಬೆಳಗ್ಗೆ ಊಟ ಮಾಡಿ ಮಧ್ಯಾಹ್ನದ ಊಟಕ್ಕೂ ಬಾಕ್ಸ್ ತೆಗೆದುಕೊಂಡು ಹೋಗಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸಿಲಿಂಡರ್ ಸಿಡಿದು ಇಡೀ ಗುಡಿಸಲೇ ಸರ್ವನಾಶವಾಗಿದೆ. ಒಂದು ವೇಳೆ ಸಿಲಿಂಡರ್ ಸ್ಫೋಟಗೊಳ್ಳುವ ವೇಳೆ ಗುಡಿಸಲು ಹಾಗೂ ಅಕ್ಕಪಕ್ಕ ಯಾರಾದರೂ ಇದ್ದಿದ್ದರೆ ಜೀವಹಾನಿಯೇ ಸಂಭವಿಸುತ್ತಿತ್ತು. ಆದರೆ, ಮಧ್ಯಾಹ್ನದ ವೇಳೆ ಆಗಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾದಂತಾಗಿದೆ. ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸ್ಸಯ್ಯ ಹಿರೇಮಠ್ ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕುಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು