2:35 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗಯಾನಾ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗಿನ ಗಿರೀಶ್ ಪಾಲೆ ಮೃತದೇಹ ಕೊನೆಗೂ ತಾಯ್ನಾಡಿಗೆ ಆಗಮನ

09/08/2025, 19:23

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿಯಾದ ಪಿ.ಬಿ ಗಿರೀಶ ಬಾಬು ಪಾಲೆ ರವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶರಿಫ್ ಜನರಲ್ ಆಸ್ಪತ್ರೆಯಲ್ಲಿ ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ ಜುಲೈ 14, 2025 ರಂದು ಸಾವನ್ನಪ್ಪಿದ್ದು, ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಿ.ಬಿ. ಗಿರೀಶ ಬಾಬು ಪಾಲೆ ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರುವ ಕ್ರಮವಹಿಸಲಾಗಿತ್ತು.
ಕರ್ನಾಟಕ ಸರ್ಕಾರದ ವತಿಯಿಂದ ರೂ 3.6 ಲಕ್ಷವನ್ನು ಮಂಜೂರು ಮಾಡಿದ್ದು, ಉಳಿಕೆ ಹಣವನ್ನು ಪಿ.ಬಿ.ಗಿರೀಶ ಬಾಬು ಪಾಲೆ ರವರು ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆಯವರು ಭರಿಸಿರುತ್ತಾರೆ. ಗಯಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಾಗೂ ನವ ದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ತರುವುದನ್ನು ಸಂಯೋಜಿಸಿ ಆಗಸ್ಟ್ 5, 2025ರ ರಾತ್ರಿ 11:30 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.
ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿಕೃಷ್ಣ ಮತ್ತು ಸಿಬ್ಬಂದಿ ಮೃತದೇಹವನ್ನು ಸ್ವೀಕರಿಸಿ ಮೃತರ ಪತ್ನಿ ಜಾನಕಿ ರವರಿಗೆ ಹಸ್ತಾಂತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು