6:02 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Traveling Story | ಗೇರ್‌ಲೆಸ್(ಸಾದಾ) ಸೈಕಲ್‌ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ

09/08/2021, 15:52

ಅನುಷ್ ಪಂಡಿತ್, ಮಂಗಳೂರು
ಗಣೇಶ್ ಅದ್ಯಪಾಡಿ, ಮಂಗಳೂರು
info.reporterkarnata@gmail.com

ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನುಭವವನ್ನು ಪಡೆದುಕೊಳ್ಳಬೇಕು ಎನ್ನುವ ಹಂಬಲದೊಂದಿಗೆ ಕೇರಳ ಮಣ ಪುರಂ‌ನ ಯುವಕ ಕಾಶ್ಮೀರಕ್ಕೆ ಹೊರಟಿದ್ದಾರೆ.

ಕೇರಳದಿಂದ ಕಾಶ್ಮೀರಕ್ಕೆ ಪ್ರವಾಸ ಹೊಸತೇನಲ್ಲ ಆದರೆ ಈ ತರುಣನ ಪ್ರವಾಸದ ವಿಧಾನವೇ ರೋಚಕವಾಗಿದೆ. ಸಾಮಾನ್ಯವಾಗಿ ಹೈ ಎಂಡ್ ಗೇರ್ ಸೈಕಲ್‌ಗಳಲ್ಲಿ ದೂರದೂರುಗಳಿಗೆ ಪ್ರವಾಸಕ್ಕೆ ಹೋಗುವುದು ಸಾಮಾನ್ಯ ಆದರೆ ಕೇರಳದ ಸಫಾನ್ ಎನ್ನುವ ಈ ಕ್ರೇಝಿಯೆಸ್ಟ್ ಯುವಕ ಹೊರಟ್ಟಿದ್ದು ಸಾಮಾನ್ಯ ಹೀರೊ ಸೈಕಲ್‌ನಲ್ಲಿ.

ಪ್ರವಾಸ ಎನ್ನುವುದು ಇವರಿಗೆ ಅತ್ಯಂತ ಪ್ರಿಯವಾದ ವಿಷಯ, ಇಲ್ಲಿಯವರೆಗೆ ಹಿಮಾಚಲ ಪ್ರದೇಶದ ಮನಾಲಿ ಸೇರಿದಂತೆ ಅನೇಕ ಕಡೆಗಳಿಗೆ ಭೇಟಿ ನೀಡಿದ್ದು, ಇದೇ ಮೊದಲ ಬಾರಿ ಸೈಕಲ್‌ನಲ್ಲಿ ಪ್ರವಾಸ ಹೊರಟಿದ್ದಾರೆ.

ಕೇರಳದಿಂದ ಏಳು ದಿನಗಳ ಹಿಂದೆ ಪ್ರಯಾಣ ಆರಂಭಿಸಿದ ಸಫಾನ್ ಇಂದು(ಆ.9) ಮಂಗಳೂರು ತಲುಪಿದ್ದಾರೆ. ಇವತ್ತು ಗೆಳೆಯನ ಮನೆಯಲ್ಲಿ ರೆಸ್ಟ್ ಮಾಡಿ ಮತ್ತೆ ಪಯಣ ಮುಂದುವರಿಸಲಿದ್ದಾರೆ. ಸುಮಾರು ಎರಡು ತಿಂಗಳ ಪ್ರವಾಸದ ಲೆಕ್ಕಾಚಾರ ಮಾಡಿಕೊಂಡಿರುವ ಇವರ ಸೈಕಲಿನಲ್ಲಿ ಮಲಗಲು ಚಾಪೆ, ಬ್ಯಾಗ್ ದಿನಬಳಕೆಗೆ ಬೇಕಾಗುವ ವಸ್ತುಗಳನ್ನು ಇಟ್ಟುಕೊಂಡಿದ್ದಾರೆ.


ಕಾಲಲ್ಲಿ ಶೂ ಅಥವಾ ಬೇರೆ ಯಾವುದೇ ಅನಕೂಲಕರ ಚಪ್ಪಲಿ ಇರದೆ ಸಾಮಾನ್ಯ ಚಪ್ಪಲಿ ಧರಿಸಿಕೊಂಡು, ಮಳೆ ಹಾಗೂ ಬಿಸಿಲಿನ ಕಣ್ಕಟ್ಟಿನ ಜೊತೆಗೆ ತಿರುವು-ಮುರುವು ಹಾಗೂ ಏರಿಳಿತಗಳ ದಾರಿಯಲ್ಲಿ ಧರೆಯ ಸ್ವರ್ಗಕ್ಕೆ ದೇವರನಾಡಿನಿಂದ ಹೊರಟ ಯುವಕನ ಈ ಧೈರ್ಯವನ್ನು ಮೆಚ್ಚಲೆಬೇಕು.

 

ಡಿಪ್ಲೊಮಾ ಕಲಿಯುತ್ತಿರುವ ಸಫಾನ್‌ ಈಗಿನ ಖಾಲಿ ಸಮಯದಲ್ಲಿ ಟ್ರಾವೆಲಿಂಗ್ ಹೊರಟಿದ್ದಾರೆ. ಸೈಕಲ್‌ನಲ್ಲಿ ಕೇರಳ ಟು ಕಾಶ್ಮೀರ್ ಎಂದು ಸ್ಟಿಕರ್ ಅಂಟಿಸಿಕೊಂಡಿದ್ದು Al_Azhar ಎನ್ನುವ ತಮ್ಮ ಇನ್ಸ್ಟಾ ಐಡಿಯನ್ನು ಮೆನ್ಶನ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು