12:04 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಗೆದ್ದ ಅಭ್ಯರ್ಥಿಯಲ್ಲಿ ಪಕ್ಷ ಬಿಡುವುದಿಲ್ಲವೆಂದು ಅಫಿದವಿತ್ ಪಡೆಯುವ ಕಾನೂನು ಬರಲಿ: ಜಸ್ಟಿಸ್ ಅರಳಿ ನಾಗರಾಜ್

01/12/2022, 20:35

ವಿಜಯಪುರ(reporterkarnataka.com): ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಸ್ಪರ್ಧಿಯಲ್ಲೂ ನಾನು ಗೆದ್ದು ಬಂದ ಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದು ಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು.
ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ರಾಷ್ಟ್ರೀಯ ಸೌಹಾರ್ದ ವೇದಿಕೆ ವಿಜಪುರ ಜಂಟಿ ಆಶ್ರಯದಲ್ಲಿ ಗುರುವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ “ಸಂವಿಧಾನದ ಆಶಯ ಈಡೇರಿದೆಯೇ? ” – ವಿಚಾರ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ದೇಶ ನನಗೇನು ಕೊಟ್ಟಿದೆ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ನಾನೇನು ಕೊಡಬಲ್ಲೆ ಎಂಬುದು ಮುಖ್ಯ , ಸ್ವಾತಂತ್ರ್ಯ ಪೂರ್ವಕ್ಕೆ ದೇಶ ಪ್ರೇಮ ಇತ್ತು . ಇತ್ತೀಚೆಗೆ ಸ್ವಾರ್ಥ ಪ್ರೇಮ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ಇಂದು ಒಂದು ಪಕ್ಷ ಸೇರಿ ಗೆದ್ದು ಬಂದವರು ಅವರಿಗೆ ಬೇಕಾದಂತೆ ಪಕ್ಷ ಬದಲಿಸಿ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನದ ಆಶಯ ಈಡೇರಿದೆಯೋ ಇಲ್ಲವೋ ಎಂಬ ಪ್ರಶ್ನೆ ತಮ್ಮ ಮುಂದೆ ಇಡುತ್ತೇನೆ, ಮೂಕ ಪ್ರೇಕ್ಷಕನಾಗದೆ ಪ್ರಶ್ನೆಗಳನ್ನು ಕೇಳುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಬ್ಯಾಂಕ್ ಬಾಲನ್ಸ್ ಮೊಬೈಲ್ ನಲ್ಲಿ ನೋಡಿಕೊಳ್ಳಬಹುದು. ಆಯಸ್ಸು ಎಷ್ಟು ಎಂಬುದು ತಿಳಿದುಕೊಳ್ಳಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಯುವಜನತೆ ಅಲೋಚಿಸಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಸ್ಟಿಸ್ ವಸಂತ ಮುಳಸಾವಳಗಿ ಮಾತನಾಡಿ, ಸಂವಿಧಾನದ ಆಶಯಗಳು ಸ್ಪಷ್ಟವಾಗಿವೆ ಮತ್ತು ನಿಖರವಾಗಿವೆ. ಅವುಗಳನ್ನು ಜಾರಿಗೊಳಿಸುವ ನಮ್ಮ ವ್ಯವಸ್ಥೆ ಎಡವುತ್ತಿರುವುದರಿಂದ ಸಂವಿದಾನದ ಆಶಯ ಈಡೇರಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾದರೆ ಯುವಜನತೆ ಜಾಗೃತರಾಗಿ ಕರ್ತವ್ಯ ನಿರ್ವಹಿಸಬೆಕಾಗಿದೆ.


ವೇದಿಕೆಯಲ್ಲಿ ಹಿರಿಯ ನ್ಯಾಯವಾದಿ ಮತ್ತು ಸಾಹಿತಿ ವಿದ್ಯಾವತಿ ಅಂಕಲಗಿ, RSV ಸಂಸ್ಥಾಪಕಿ ರಾಜೇಶ್ವರಿ ಹಿಪ್ಪರಗಿ, ನಿರ್ದೇಶಕ ಜೆ.ಎಸ್. ಪಾಟೀಲ್, ಅಧ್ಯಕ್ಷ ಚಂದ್ರಶೇಖರ ಘಂಟಪ್ಪಗೋಳ, ಕಾರ್ಯದರ್ಶಿ ಫಯಾಜ್ ಕಲಾದಗಿ ಮುಂತಾದವರು ಉಪಸ್ಥಿತರಿದ್ದರು. ಮಣಿಕಂಠ ಮಠಪತಿಯವರು ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು
ಚಂದ್ರಶೇಖರ ಘಂಟಪ್ಪಗೋಳ ಸ್ವಾಗತಿಸಿ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಪ್ರಸ್ತಾವನೆಗೈದರು. ರೋಹಿಣಿ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು