7:48 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು