7:01 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು