3:22 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು