10:05 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಪತ್ತೆ ಪ್ರಕರಣ: ಆರೋಪಿ ಲೋಹಿತ್‌ ತಮಿಳುನಾಡಿನಿಂದ ತಂದಿರುವ ಶಂಕೆ

13/05/2026, 21:58

ಬೆಂಗಳೂರು(reporterkarnataka.com): ಬೆಂಗಳೂರಿನ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದಲ್ಲಿ ಈಗ ತಮಿಳುನಾಡು ಕನೆಕ್ಷನ್ ಇದೆ ಎನ್ನಲಾಗಿದೆ.
ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಒಂದು ದಿನ ಮುಂಚಿತವಾಗಿ, ಅಂದರೆ ಮೇ 9ರಂದು ಆರೋಪಿ ಲೋಹಿತ್ ತಮಿಳುನಾಡಿಗೆ ಭೇಟಿ ನೀಡಿದ್ದ ಎಂಬ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನಲ್ಲಿ ಜಿಲೆಟಿನ್ ತಯಾರಿಕಾ ಘಟಕಗಳು ಹೆಚ್ಚಿರುವುದರಿಂದ, ಅಲ್ಲಿಂದಲೇ ಇವುಗಳನ್ನು ತರಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ತೆಯಾದ ಸ್ಫೋಟಕಗಳು ಎರಡು ವರ್ಷ ಹಳೆಯದಾಗಿದ್ದು, ಅವುಗಳ ಶಕ್ತಿ ಕುಂದಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೂ ಪ್ರಧಾನಿ ಸಂಚರಿಸುವ ಮಾರ್ಗದ ಸಮೀಪವೇ ಇವು ಪತ್ತೆಯಾಗಿರುವುದು ಭದ್ರತಾ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಲ್ಪಟ್ಟಿದೆ.
ಸ್ಥಳೀಯ ಕ್ವಾರಿಗಳಿಂದ ಇವುಗಳನ್ನು ಎಸೆಯಲಾಗಿದೆಯೇ ಅಥವಾ ಪ್ರಧಾನಿ ಭೇಟಿ ವೇಳೆ ಆತಂಕ ಸೃಷ್ಟಿಸಲು ನಡೆಸಿದ ಸಂಚೇ ಎಂಬ ಆಯಾಮದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಇನ್ನು, ತಮಿಳುನಾಡಿನ ಸ್ಫೋಟಕ ಮಾರಾಟಗಾರರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆರೋಪಿ ತಮಿಳುನಾಡಿಗೆ ಭೇಟಿ ನೀಡಿದ್ದು ಯಾಕೆ? ಸ್ಫೋಟಕಗಳನ್ನು ತರಲು ಹೋಗಿದ್ದನೇ? ಎಂಬ ಅನುಮಾನ ಪೊಲೀಸರನ್ನು ಕಾಡುತ್ತಿದೆ. ಒಂದೆರೆಡು ದಿನಗಳಲ್ಲಿ ಪೊಲೀಸರು ಸಂಪೂರ್ಣ ಮಾಹಿತಿ ಸಂಗ್ರಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು