9:57 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಪತ್ತೆ ಪ್ರಕರಣ: ಆರೋಪಿ ಲೋಹಿತ್‌ ತಮಿಳುನಾಡಿನಿಂದ ತಂದಿರುವ ಶಂಕೆ

13/05/2026, 21:58

ಬೆಂಗಳೂರು(reporterkarnataka.com): ಬೆಂಗಳೂರಿನ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದಲ್ಲಿ ಈಗ ತಮಿಳುನಾಡು ಕನೆಕ್ಷನ್ ಇದೆ ಎನ್ನಲಾಗಿದೆ.
ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಒಂದು ದಿನ ಮುಂಚಿತವಾಗಿ, ಅಂದರೆ ಮೇ 9ರಂದು ಆರೋಪಿ ಲೋಹಿತ್ ತಮಿಳುನಾಡಿಗೆ ಭೇಟಿ ನೀಡಿದ್ದ ಎಂಬ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನಲ್ಲಿ ಜಿಲೆಟಿನ್ ತಯಾರಿಕಾ ಘಟಕಗಳು ಹೆಚ್ಚಿರುವುದರಿಂದ, ಅಲ್ಲಿಂದಲೇ ಇವುಗಳನ್ನು ತರಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ತೆಯಾದ ಸ್ಫೋಟಕಗಳು ಎರಡು ವರ್ಷ ಹಳೆಯದಾಗಿದ್ದು, ಅವುಗಳ ಶಕ್ತಿ ಕುಂದಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೂ ಪ್ರಧಾನಿ ಸಂಚರಿಸುವ ಮಾರ್ಗದ ಸಮೀಪವೇ ಇವು ಪತ್ತೆಯಾಗಿರುವುದು ಭದ್ರತಾ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಲ್ಪಟ್ಟಿದೆ.
ಸ್ಥಳೀಯ ಕ್ವಾರಿಗಳಿಂದ ಇವುಗಳನ್ನು ಎಸೆಯಲಾಗಿದೆಯೇ ಅಥವಾ ಪ್ರಧಾನಿ ಭೇಟಿ ವೇಳೆ ಆತಂಕ ಸೃಷ್ಟಿಸಲು ನಡೆಸಿದ ಸಂಚೇ ಎಂಬ ಆಯಾಮದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಇನ್ನು, ತಮಿಳುನಾಡಿನ ಸ್ಫೋಟಕ ಮಾರಾಟಗಾರರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆರೋಪಿ ತಮಿಳುನಾಡಿಗೆ ಭೇಟಿ ನೀಡಿದ್ದು ಯಾಕೆ? ಸ್ಫೋಟಕಗಳನ್ನು ತರಲು ಹೋಗಿದ್ದನೇ? ಎಂಬ ಅನುಮಾನ ಪೊಲೀಸರನ್ನು ಕಾಡುತ್ತಿದೆ. ಒಂದೆರೆಡು ದಿನಗಳಲ್ಲಿ ಪೊಲೀಸರು ಸಂಪೂರ್ಣ ಮಾಹಿತಿ ಸಂಗ್ರಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು