9:03 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಗೆಳೆಯರ ಜತೆ ದೇವರ ಮನೆಗೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿ ಯುವಕ ಮನೆ ಸಮೀಪದ ಮೋರಿ ಬಳಿ ಪತ್ತೆ; ಕುಡಿತದ ಮತ್ತಿನಲ್ಲಿ ನಡೆದ ಗಲಾಟೆ ಸುಖಾಂತ್ಯ

11/10/2023, 11:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆಗೆ ಬೆಳ್ತಂಗಡಿಯಿಂದ ಪ್ರವಾಸಕ್ಕೆ ಬಂದಿದ್ದ ಗೆಳೆಯರ ಗುಂಪಿನಿಂದ ನಾಪತ್ತೆಯಾಗಿದ್ದ ಯುವಕ ಪತ್ತೆಯಾಗಿದ್ದಾನೆ.

ದೇವರ ಮನೆಗೆ ಪ್ರಸಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ, ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆ ಕಾರಿನಲ್ಲಿ ಹೋಗಿದ್ದರು. ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂತಿರುಗುವಾಗ ಕುಡಿದ ಮತ್ತಿನಲ್ಲಿದ್ದ ಯುವಕರ ಮಧ್ಯದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರು. ನಂತರ‌ ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆಮಂದಿ ಮಾಹಿತಿ ನೀಡಿದ್ದಾರೆ. ಯುವಕರು ಕುಡಿದ ಮತ್ತಿನಲ್ಲಿ ಮಾಡಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು