10:47 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಗೆಳೆಯರ ಜತೆ ದೇವರ ಮನೆಗೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿ ಯುವಕ ಮನೆ ಸಮೀಪದ ಮೋರಿ ಬಳಿ ಪತ್ತೆ; ಕುಡಿತದ ಮತ್ತಿನಲ್ಲಿ ನಡೆದ ಗಲಾಟೆ ಸುಖಾಂತ್ಯ

11/10/2023, 11:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆಗೆ ಬೆಳ್ತಂಗಡಿಯಿಂದ ಪ್ರವಾಸಕ್ಕೆ ಬಂದಿದ್ದ ಗೆಳೆಯರ ಗುಂಪಿನಿಂದ ನಾಪತ್ತೆಯಾಗಿದ್ದ ಯುವಕ ಪತ್ತೆಯಾಗಿದ್ದಾನೆ.

ದೇವರ ಮನೆಗೆ ಪ್ರಸಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ, ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆ ಕಾರಿನಲ್ಲಿ ಹೋಗಿದ್ದರು. ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂತಿರುಗುವಾಗ ಕುಡಿದ ಮತ್ತಿನಲ್ಲಿದ್ದ ಯುವಕರ ಮಧ್ಯದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರು. ನಂತರ‌ ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆಮಂದಿ ಮಾಹಿತಿ ನೀಡಿದ್ದಾರೆ. ಯುವಕರು ಕುಡಿದ ಮತ್ತಿನಲ್ಲಿ ಮಾಡಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು