4:56 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಗೆಳೆಯರ ನಿರ್ಲಕ್ಷ್ಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

14/09/2023, 10:33

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಗಾಯಗೊಂಡಿದ್ದ ಹಾರೂಗೇರಿ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ
ಪ್ರಶಾಂತ್ ಕನ್ನೇಶ ಸೇಡಬಾಳೆ (25) ಸಾವನ್ನಪ್ಪಿದ ಯುವಕ.
ಮೊಳೆ ಗ್ರಾಮದ ಜಾತ್ರೆ ಮುಗಿಸಿಕೊಂಡು ಹಾರೂಗೇರಿಗೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಕುಡಿದ ಅಮಲಿನಲ್ಲಿ ಬೈಕ್ ಸ್ಕಿಡ್ ಆಗಿ ಮೊಳೆ ತಂಗಡಿ ರಸ್ತೆ ಮಧ್ಯೆ ಅಪಘಾತಕ್ಕೆ ಒಳಗಾಗಿತ್ತು. ಅಪಘಾತ ಸಂಭವಿಸಿದ ನಂತರ ಸ್ನೇಹಿತರು ಗಾಯಾಳುವನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ವೈದ್ಯರು ಪ್ರಥಮ ಚಿಕಿತ್ಸೆ ನಂತರ ಸ್ಕ್ಯಾನಿಂಗ್ ಮಾಡಲು ತಿಳಿಸಿದ್ದಾರೆ. ಆದರೆ ಕುಡಿದ ಅಮಲಿನಲ್ಲಿದ್ದ ಗೆಳೆಯರು ಪ್ರಶಾಂತ್ ಗೆ ಏನು ಆಗಿಲ್ಲ ಎಂದು ಹೇಳಿ ಕೆಂಪವಾಡ ಬಳಿ ರಾತ್ರಿ ಬಿಟ್ಟು ಹೋಗಿದ್ದಾರೆ.
ರಾತ್ರಿ ಇಡಿ ತೀವ್ರ ರಕ್ತಸ್ರಾವದಿಂದ ಪ್ರಶಾಂತ ಸಾವು ಸಂಭವಿಸಿದೆ ಸುದ್ದಿ ತಿಳಿದ ಕಾಗವಾಡ ಪಿಎಸ್ಐ ಹಣಮಂತ ನೇರಳೆ ಸಿಪಿಐ ರವೀಂದ್ರ ನಾಯ್ಕೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು