3:19 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗೆಳೆಯರ ನಿರ್ಲಕ್ಷ್ಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

14/09/2023, 10:33

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಗಾಯಗೊಂಡಿದ್ದ ಹಾರೂಗೇರಿ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ
ಪ್ರಶಾಂತ್ ಕನ್ನೇಶ ಸೇಡಬಾಳೆ (25) ಸಾವನ್ನಪ್ಪಿದ ಯುವಕ.
ಮೊಳೆ ಗ್ರಾಮದ ಜಾತ್ರೆ ಮುಗಿಸಿಕೊಂಡು ಹಾರೂಗೇರಿಗೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಕುಡಿದ ಅಮಲಿನಲ್ಲಿ ಬೈಕ್ ಸ್ಕಿಡ್ ಆಗಿ ಮೊಳೆ ತಂಗಡಿ ರಸ್ತೆ ಮಧ್ಯೆ ಅಪಘಾತಕ್ಕೆ ಒಳಗಾಗಿತ್ತು. ಅಪಘಾತ ಸಂಭವಿಸಿದ ನಂತರ ಸ್ನೇಹಿತರು ಗಾಯಾಳುವನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ವೈದ್ಯರು ಪ್ರಥಮ ಚಿಕಿತ್ಸೆ ನಂತರ ಸ್ಕ್ಯಾನಿಂಗ್ ಮಾಡಲು ತಿಳಿಸಿದ್ದಾರೆ. ಆದರೆ ಕುಡಿದ ಅಮಲಿನಲ್ಲಿದ್ದ ಗೆಳೆಯರು ಪ್ರಶಾಂತ್ ಗೆ ಏನು ಆಗಿಲ್ಲ ಎಂದು ಹೇಳಿ ಕೆಂಪವಾಡ ಬಳಿ ರಾತ್ರಿ ಬಿಟ್ಟು ಹೋಗಿದ್ದಾರೆ.
ರಾತ್ರಿ ಇಡಿ ತೀವ್ರ ರಕ್ತಸ್ರಾವದಿಂದ ಪ್ರಶಾಂತ ಸಾವು ಸಂಭವಿಸಿದೆ ಸುದ್ದಿ ತಿಳಿದ ಕಾಗವಾಡ ಪಿಎಸ್ಐ ಹಣಮಂತ ನೇರಳೆ ಸಿಪಿಐ ರವೀಂದ್ರ ನಾಯ್ಕೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು