7:55 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಜನರ ನಿರೀಕ್ಷೆ ಈಡೇರಿಸುವೆ: ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ

23/11/2024, 17:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಿನ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಹೇಳಿದ್ದಾರೆ.
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮೊದಲಿಗೆ ಸಂಡೂರಿನ ಜನತೆಗೆ ಧನ್ಯವಾದ ಅರ್ಪಿಸಿದರು.

ಸಂಡೂರಿನ ಜನ ಯಾವತ್ತೂ ಕಾಂಗ್ರೆಸ್‌ ಕೈ ಬಿಟ್ಟಿಲ್ಲ. ನಮ್ಮ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳು, ಮಹಿಳೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದು, ಒಗ್ಗಟಿನ ಹೋರಾಟ ನಮ್ಮ ಗೆಲುವಿಗೆ ಕಾರಣವಾಗಿದೆ’ ಎಂದರು.
ನನ್ನ ಕ್ಷೇತ್ರದ ಜನ ನನಗೆ ನೀಡಿರುವ ಕೊಡುಗೆಯನ್ನು ನನ್ನ ಸೇವೆಯ ಮೂಲಕ ಮತ್ತೆ ಹಿಂದಿರುಗಿಸುವೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆ. ಅದನ್ನು ಭದ್ರಪಡಿಸುವ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆ ನಡೆದುಕೊಳ್ಳುವೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ. 49ರಷ್ಟು ಮತ ಸಿಕ್ಕಿತ್ತು. ಈಗ ಶೇ. 51 ಮತ ಸಿಕ್ಕಿದೆ. ಅದರಂತೆ ನೋಡಿದರೆ ನಮ್ಮ ಮತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮತ್ತು ಸಂಡೂರಿನ ಜನ ತುಕಾರಾಂ ಅವರನ್ನು ಸಂಸತ್‌ಗೆ, ನನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ್ದಾರೆ. ವೈವಾಹಿಕ ಜೀನದಲ್ಲಿ ಪರಸ್ಪರ ಸಹಕಾರದೊಂದಿಗೆ ಬಾಳ್ವೆ ನಡೆಸಿದ ನಾವು, ರಾಜಕೀಯದಲ್ಲೂ ಪರಸ್ಪರ ಸಹಕರಿಸುತ್ತಲೇ ಕೆಲಸ ಮಾಡುತ್ತೇವೆ ಎಂದು ಅನ್ನಪೂರ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕಿನ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಸಂಡೂರು ಬಸ್‌ ನಿಲ್ದಾಣಕ್ಕೂ ಭೂಮಿ ಪೂಜೆ ಆಗಿದೆ. ಅದನ್ನು ಬೇಗ ಪೂರ್ಣಗೊಳಿಸುವೆ. ಅವುಗಳನ್ನು ಆದ್ಯತೆಯಾಗಿ ಪರಿಗಣಿಸುವೆ’ ಎಂದು ಇದೇ ವೇಳೆ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು