9:08 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ವೆನ್‍ಲಾಕ್‍ಗೆ ದಾಖಲು; ಜಿಲ್ಲಾಧಿಕಾರಿ ತುರ್ತು ಸಭೆ

17/12/2021, 22:54

 

ಮಂಗಳೂರು (reporterkarnataka.com): ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.

ಅವರು ಶುಕ್ರವಾರ ಮಧ್ಯಾಹ್ನ ಏರ್ ಪೋರ್ಟ್ ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರ್ಯಾಂಡಮೈಸ್ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರಿಯೇಶನ್, ಏರ್‍ ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.   

ಸಭೆಯಲ್ಲಿ ಚೀಫ್ ಏರ್‍ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್‍ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು