11:39 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ ನಾಯಕ ಎನ್. ರವಿ ಕುಮಾರ್ ಆಗ್ರಹ

31/05/2025, 20:30

ಮಂಗಳೂರು(reporterkarnataka.com): ಮಳೆ ದುರಂತದಲ್ಲಿ ತನ್ನ ಎರಡು ಮಕ್ಕಳು ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಮಂಜನಾಡಿ ಸಮೀಪದ ಮೊಂಟೆಪದವು ನಿವಾಸಿ ಅಶ್ವಿನಿ ಅವರಿಗೆ ಸರಕಾರಿ ನೌಕರಿ ನೀಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಆಗ್ರಹಿಸಿದ್ದಾರೆ.

ಜಿಲ್ಲೆಯ ಗುಡ್ಡವಾರು ಪ್ರದೇಶಗಳಲ್ಲಿ ಅಪಾಯವನ್ನು ಸೂಚಿಸುವ ಮನೆಗಳನ್ನು ತಕ್ಷಣಕ್ಕೆ ಸ್ಥಳಾಂತರಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಮೊಂಟೆಪದವು ಪಂಬದಹಿತ್ತಿಲು ಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಾವನ್ನಪ್ಪಿದ ಅಜ್ಜಿ ಹಾಗೂ ಮೊಮ್ಮಕ್ಕಳಿಬ್ಬರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ, ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ವಿನಿ, ಮಾವ ಕಾಂತಪ್ಪ ಪೂಜಾರಿ ಅವರ ಆರೋಗ್ಯ ವಿಚಾರಣೆ ನಡೆಸಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಸರಕಾರದಿಂದ ನೊಂದ ಕುಟುಂಬಕ್ಕೆ ಸಹಕಾರ ಸಿಗಬೇಕಿದೆ. ಮಕ್ಕಳಿಬ್ಬರನ್ನು ಕಳೆದುಕೊಂಡ ತಾಯಿ ಕಾಲುಗಳನ್ನು ಕಳೆದುಕೊಂಡಿರುವುದು ಅತೀವ ದುಃಖವನ್ನುಂಟು ಮಾಡಿದೆ. ಮಳೆ ಅನಾಹುತದ ಮುನ್ನವೇ ಜಿಲ್ಲಾಡಳಿತ, ಸರಕಾರಗಳು ಜನರ ರಕ್ಷಣೆಯಲ್ಲಿ ಸನ್ನದ್ಧವಾಗಿರಬೇಕು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರವನ್ನು ಕುಟುಂಬಕ್ಕೆ ಒದಗಿಸಬೇಕಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್, ಕ್ಷೇತ್ರ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಹೇಮಂತ್ ಶೆಟ್ಟಿ, ಸುರೇಶ್ ಆಳ್ವ ತಲಪಾಡಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು