2:52 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ ನಾಯಕ ಎನ್. ರವಿ ಕುಮಾರ್ ಆಗ್ರಹ

31/05/2025, 20:30

ಮಂಗಳೂರು(reporterkarnataka.com): ಮಳೆ ದುರಂತದಲ್ಲಿ ತನ್ನ ಎರಡು ಮಕ್ಕಳು ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಮಂಜನಾಡಿ ಸಮೀಪದ ಮೊಂಟೆಪದವು ನಿವಾಸಿ ಅಶ್ವಿನಿ ಅವರಿಗೆ ಸರಕಾರಿ ನೌಕರಿ ನೀಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಆಗ್ರಹಿಸಿದ್ದಾರೆ.

ಜಿಲ್ಲೆಯ ಗುಡ್ಡವಾರು ಪ್ರದೇಶಗಳಲ್ಲಿ ಅಪಾಯವನ್ನು ಸೂಚಿಸುವ ಮನೆಗಳನ್ನು ತಕ್ಷಣಕ್ಕೆ ಸ್ಥಳಾಂತರಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಮೊಂಟೆಪದವು ಪಂಬದಹಿತ್ತಿಲು ಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಾವನ್ನಪ್ಪಿದ ಅಜ್ಜಿ ಹಾಗೂ ಮೊಮ್ಮಕ್ಕಳಿಬ್ಬರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ, ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ವಿನಿ, ಮಾವ ಕಾಂತಪ್ಪ ಪೂಜಾರಿ ಅವರ ಆರೋಗ್ಯ ವಿಚಾರಣೆ ನಡೆಸಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಸರಕಾರದಿಂದ ನೊಂದ ಕುಟುಂಬಕ್ಕೆ ಸಹಕಾರ ಸಿಗಬೇಕಿದೆ. ಮಕ್ಕಳಿಬ್ಬರನ್ನು ಕಳೆದುಕೊಂಡ ತಾಯಿ ಕಾಲುಗಳನ್ನು ಕಳೆದುಕೊಂಡಿರುವುದು ಅತೀವ ದುಃಖವನ್ನುಂಟು ಮಾಡಿದೆ. ಮಳೆ ಅನಾಹುತದ ಮುನ್ನವೇ ಜಿಲ್ಲಾಡಳಿತ, ಸರಕಾರಗಳು ಜನರ ರಕ್ಷಣೆಯಲ್ಲಿ ಸನ್ನದ್ಧವಾಗಿರಬೇಕು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರವನ್ನು ಕುಟುಂಬಕ್ಕೆ ಒದಗಿಸಬೇಕಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್, ಕ್ಷೇತ್ರ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಹೇಮಂತ್ ಶೆಟ್ಟಿ, ಸುರೇಶ್ ಆಳ್ವ ತಲಪಾಡಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು