2:01 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣ: ಇಬ್ಬರ ಬಂಧನ; 1.65 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶ

17/12/2025, 10:30

ಮಂಗಳೂರು(reporterkarnataka.com): ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉಳ್ಳಾಲದ ನಿವಾಸಿ
ಪೈಸಲ್ ಅಲಿಯಾಸ್ ತೋಟ ಪೈಸಲ್ ಹಾಗೂ ಮೈಸೂರಿನ
ನಿತೀನ್  ಕುಮಾರ್ ಎಂದು ಗುರುತಿಸಲಾಗಿದೆ.
ಡಿ. 12ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ   ಕಂಪನಿಯ  KA-19-ER-7755 ಮೋಟಾರ್ ಸೈಕಲ್ ನ್ನು ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ಇಂದು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಈ ಆರೋಪಿಗಳು 13-12-2025 ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆಯಾದ ಹೊನ್ನಮ್ಮ ಮಹಾದೇವ ನಾಯ್ಕ್ ಅವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದು, ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಪೈಸಲ್ ಅಲಿಯಾಸ್ ತೋಟ ಪೈಸಲ್ ಈತನ ವಿರುದ್ದ ಉಡುಪಿ, ಕಾರ್ಕಳ, ಮಣಿಪಾಲ, ಮಂಗಳೂರು. ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ,  ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ  ಸುಮಾರು 42 ಪ್ರಕರಣಗಳು ದಾಖಲಾಗಿರುತ್ತದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10 ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ತಪ್ಪಿಸಿಕೊಂಡಿರುತ್ತಾನೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೆಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು