4:11 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್, ಫ್ಯಾನ್‍, ಏರ್ ಕೂಲರ್ !

11/03/2025, 22:54

ಬೆಂಗಳೂರು (reporterkarnataka.com) : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿದೆ.
ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ಶಾಖದ ಒತ್ತಡವನ್ನು ತಡೆಗಟ್ಟಲು ಮತ್ತು ತಂಪಾದ ವಾತಾವರಣವನ್ನು ನಿರ್ಮಿಸಲು ಎಲ್ಲಾ ಪ್ರಾಣಿ ಮನೆಗಳಲ್ಲಿ ನೀರಿನ ಜೆಟ್‍ಗಳು ಮತ್ತು ನೀರಿನ ಸಿಂಪರಣೆಗಳನ್ನು ಒದಗಿಸಲಾಗಿದೆ.
ರಾತ್ರಿಯಲ್ಲಿ ಒಳಾವರಣಗಳಲ್ಲಿ ಈ ಪ್ರಾಣಿಗಳು ಆರಾಮದಾಯಕ ಸ್ಥಿತಿಯಲ್ಲಿರಲು ಫ್ಯಾನ್‍ಗಳು ಮತ್ತು ಕೂಲರ್ ಗಳ ವ್ಯವಸ್ಥೆ ಯನ್ನು ಮಾಡಲಾಗಿರುತ್ತದೆ. ಹಿಮಾಲಯದ ಕಪ್ಪು ಕರಡಿಗಳಿಗೆ ಉಷ್ಣಾಂಶವನ್ನು ನಿಯಂತ್ರಿಸಲು ಸಹಾಯವಾಗುವಂತೆ ಆಹಾರವನ್ನು ಐಸ್‍ಬ್ಲಾಕ್ ರೀತಿಯಲ್ಲಿ ಒದಗಿಸಲಾಗುತ್ತಿದೆ.
ತಂಪಾದ ಆಹಾರ ಕ್ರಮವನ್ನು ಖಾತ್ರಿಪಡಿಸಲು ಎಲ್ಲಾ ಬಗೆಯ ವಾನರ ಜಾತಿಯ ಪ್ರಾಣಿಗಳಾದ ಗೊರಿಲ್ಲಾ, ಒರಾಂಗೂಟಾನ್, ಚಿಂಪಾಂಜಿ ಇತ್ಯಾದಿ ಪ್ರಾಣಿಗಳಿಗೆ ದಿನಕ್ಕೆ ಎರಡು ಬಾರಿ ತಾಜಾ ಎಳನೀರು ನೀರಿನಾಂಶವುಳ್ಳ ತರಕಾರಿ ಹಾಗೂ ಹಣ್ಣುಗಳಾದ ಕಲ್ಲಂಗಡಿ, ಸೌತೆಕಾಯಿ, ಕರಬೂಜ ಇತ್ಯಾದಿಗಳನ್ನು ಅವುಗಳ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ ನೀಡಲಾಗುತ್ತಿದೆ ಹಾಗೂ ಓ.ಆರ್.ಎಸ್. ಅನ್ನು ಅವುಗಳ ಆಹಾರದಲ್ಲಿ ಬಳಸಲಾಗುತ್ತಿದೆ.
ಎಲ್ಲಾ ಬಗೆಯ ಸಸ್ಯಾಹಾರಿ ಪ್ರಾಣಿಮನೆಗಳಲ್ಲಿ ಕೆಸರಿನ ಕೊಳವನ್ನು ನಿರ್ಮಿಸುವ ಮೂಲಕ ಅವುಗಳಿಗೆ ನೈಸರ್ಗಿಕ ತಣ್ಣನೆಯ ವಾತಾವರಣವನ್ನು ಕಲ್ಪಿಸಲಾಗಿದೆ. ಪ್ರಾಣಿಗಳು ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಪ್ರಾಣಿಮನೆಗಳಲ್ಲಿ ಚಪ್ಪರ ಗಳನ್ನು ಒದಗಿಸಲಾಗಿದೆ.
ಪ್ರತಿ ಪ್ರಾಣಿಮನೆಗಳಲ್ಲಿರುವ ಉಷ್ಣಾಂಶವನ್ನು ತಿಳಿದುಕೊಳ್ಳಲು ಉಷ್ಣಮಾಪಕಗಳನ್ನು ಆಳವಡಿಸಲಾಗಿರುತ್ತದೆ. ಉಷ್ಣಮಾಪಕಗಳು ಏರುತ್ತಿರುವ ತಾಪಮಾನದಿಂದ ಮೃಗಾಲಯದೊಳಗಿರುವ ಎಲ್ಲಾ ಪ್ರಾಣಿಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸಿ ರಕ್ಷಿಸಲು ಹಾಗೂ ಅವುಗಳನ್ನು ಕ್ಷೇಮವಾಗಿರಿಸಲು ಸಹಾಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು