6:36 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್, ಫ್ಯಾನ್‍, ಏರ್ ಕೂಲರ್ !

11/03/2025, 22:54

ಬೆಂಗಳೂರು (reporterkarnataka.com) : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿದೆ.
ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ಶಾಖದ ಒತ್ತಡವನ್ನು ತಡೆಗಟ್ಟಲು ಮತ್ತು ತಂಪಾದ ವಾತಾವರಣವನ್ನು ನಿರ್ಮಿಸಲು ಎಲ್ಲಾ ಪ್ರಾಣಿ ಮನೆಗಳಲ್ಲಿ ನೀರಿನ ಜೆಟ್‍ಗಳು ಮತ್ತು ನೀರಿನ ಸಿಂಪರಣೆಗಳನ್ನು ಒದಗಿಸಲಾಗಿದೆ.
ರಾತ್ರಿಯಲ್ಲಿ ಒಳಾವರಣಗಳಲ್ಲಿ ಈ ಪ್ರಾಣಿಗಳು ಆರಾಮದಾಯಕ ಸ್ಥಿತಿಯಲ್ಲಿರಲು ಫ್ಯಾನ್‍ಗಳು ಮತ್ತು ಕೂಲರ್ ಗಳ ವ್ಯವಸ್ಥೆ ಯನ್ನು ಮಾಡಲಾಗಿರುತ್ತದೆ. ಹಿಮಾಲಯದ ಕಪ್ಪು ಕರಡಿಗಳಿಗೆ ಉಷ್ಣಾಂಶವನ್ನು ನಿಯಂತ್ರಿಸಲು ಸಹಾಯವಾಗುವಂತೆ ಆಹಾರವನ್ನು ಐಸ್‍ಬ್ಲಾಕ್ ರೀತಿಯಲ್ಲಿ ಒದಗಿಸಲಾಗುತ್ತಿದೆ.
ತಂಪಾದ ಆಹಾರ ಕ್ರಮವನ್ನು ಖಾತ್ರಿಪಡಿಸಲು ಎಲ್ಲಾ ಬಗೆಯ ವಾನರ ಜಾತಿಯ ಪ್ರಾಣಿಗಳಾದ ಗೊರಿಲ್ಲಾ, ಒರಾಂಗೂಟಾನ್, ಚಿಂಪಾಂಜಿ ಇತ್ಯಾದಿ ಪ್ರಾಣಿಗಳಿಗೆ ದಿನಕ್ಕೆ ಎರಡು ಬಾರಿ ತಾಜಾ ಎಳನೀರು ನೀರಿನಾಂಶವುಳ್ಳ ತರಕಾರಿ ಹಾಗೂ ಹಣ್ಣುಗಳಾದ ಕಲ್ಲಂಗಡಿ, ಸೌತೆಕಾಯಿ, ಕರಬೂಜ ಇತ್ಯಾದಿಗಳನ್ನು ಅವುಗಳ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ ನೀಡಲಾಗುತ್ತಿದೆ ಹಾಗೂ ಓ.ಆರ್.ಎಸ್. ಅನ್ನು ಅವುಗಳ ಆಹಾರದಲ್ಲಿ ಬಳಸಲಾಗುತ್ತಿದೆ.
ಎಲ್ಲಾ ಬಗೆಯ ಸಸ್ಯಾಹಾರಿ ಪ್ರಾಣಿಮನೆಗಳಲ್ಲಿ ಕೆಸರಿನ ಕೊಳವನ್ನು ನಿರ್ಮಿಸುವ ಮೂಲಕ ಅವುಗಳಿಗೆ ನೈಸರ್ಗಿಕ ತಣ್ಣನೆಯ ವಾತಾವರಣವನ್ನು ಕಲ್ಪಿಸಲಾಗಿದೆ. ಪ್ರಾಣಿಗಳು ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಪ್ರಾಣಿಮನೆಗಳಲ್ಲಿ ಚಪ್ಪರ ಗಳನ್ನು ಒದಗಿಸಲಾಗಿದೆ.
ಪ್ರತಿ ಪ್ರಾಣಿಮನೆಗಳಲ್ಲಿರುವ ಉಷ್ಣಾಂಶವನ್ನು ತಿಳಿದುಕೊಳ್ಳಲು ಉಷ್ಣಮಾಪಕಗಳನ್ನು ಆಳವಡಿಸಲಾಗಿರುತ್ತದೆ. ಉಷ್ಣಮಾಪಕಗಳು ಏರುತ್ತಿರುವ ತಾಪಮಾನದಿಂದ ಮೃಗಾಲಯದೊಳಗಿರುವ ಎಲ್ಲಾ ಪ್ರಾಣಿಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸಿ ರಕ್ಷಿಸಲು ಹಾಗೂ ಅವುಗಳನ್ನು ಕ್ಷೇಮವಾಗಿರಿಸಲು ಸಹಾಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು