7:34 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ

ಇತ್ತೀಚಿನ ಸುದ್ದಿ

ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ

09/09/2024, 20:03

ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ‌ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.
ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ ಆಭರಣಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ‌ಪುಸ್ತಕ‌ ಪರಿಚಯ ಮಾಡಿ ಮಾತನಾಡುತ್ತಿದ್ದರು.
ಪತ್ರಕರ್ತರ ಜೀವನ ಮತ್ತು ಸಾಹಿತಿ ಹಾಗೂ ಶಿಕ್ಷಕರ ಜೀವನ ಒಂದು ಪ್ರೆಶರ್ ನಲ್ಲಿ ಈಗ ಇದೆ. ಯಾವುದು ಬರೆಯಬೇಕು, ಹೇಳಬೇಕು, ಕಲಿಸಬೇಕು ಎಂದು ಹೇಳುವ ಒತ್ತಡ ಇಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮುಕ್ತವಾಗಿ ಮತ್ತು ಸರಳವಾಗಿ ಎಲ್ಲವೂ ಇದ್ದರೆ ಒಳ್ಳೆಯದು ಎಂಬುವ ಅಭಿಪ್ರಾಯ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ ಮಾಡಿದ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಸಾಹಿತ್ಯದ ಮಗ್ಗುಲುಗಳನ್ನು ಪತ್ರಕರ್ತರ ಜೀವನದ ಒಂದು ಅಂಶ ಅದನ್ನು ಮರೆಯದೆ ಬರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರು ತಮ್ಮ ಬೈಲೈನ್ ಆರ್ಟಿಕಲ್ಸ್ ಸಂಗ್ರಹಿಸಿ ಪುಸ್ತಕ ಪ್ರಕಟ ಮಾಡಬೇಕು. ಇಲ್ಲವಾದರೆ ನಾವು ಎಷ್ಟು ದೊಡ್ಡ ಪತ್ರಕರ್ತರು ಆದರೂ‌ ಮತ್ತೆ ಮರೆತು ಹೋಗುತ್ತವೆ ಎಂದರು.
ಹಿರಿಯ ಪತ್ರಕರ್ತ ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿದರು. ರಿಯಾನಾ ಡಿಕೂನಾ ವಂದಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು