1:44 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ

09/09/2024, 20:03

ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ‌ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.
ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ ಆಭರಣಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ‌ಪುಸ್ತಕ‌ ಪರಿಚಯ ಮಾಡಿ ಮಾತನಾಡುತ್ತಿದ್ದರು.
ಪತ್ರಕರ್ತರ ಜೀವನ ಮತ್ತು ಸಾಹಿತಿ ಹಾಗೂ ಶಿಕ್ಷಕರ ಜೀವನ ಒಂದು ಪ್ರೆಶರ್ ನಲ್ಲಿ ಈಗ ಇದೆ. ಯಾವುದು ಬರೆಯಬೇಕು, ಹೇಳಬೇಕು, ಕಲಿಸಬೇಕು ಎಂದು ಹೇಳುವ ಒತ್ತಡ ಇಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮುಕ್ತವಾಗಿ ಮತ್ತು ಸರಳವಾಗಿ ಎಲ್ಲವೂ ಇದ್ದರೆ ಒಳ್ಳೆಯದು ಎಂಬುವ ಅಭಿಪ್ರಾಯ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ ಮಾಡಿದ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಸಾಹಿತ್ಯದ ಮಗ್ಗುಲುಗಳನ್ನು ಪತ್ರಕರ್ತರ ಜೀವನದ ಒಂದು ಅಂಶ ಅದನ್ನು ಮರೆಯದೆ ಬರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರು ತಮ್ಮ ಬೈಲೈನ್ ಆರ್ಟಿಕಲ್ಸ್ ಸಂಗ್ರಹಿಸಿ ಪುಸ್ತಕ ಪ್ರಕಟ ಮಾಡಬೇಕು. ಇಲ್ಲವಾದರೆ ನಾವು ಎಷ್ಟು ದೊಡ್ಡ ಪತ್ರಕರ್ತರು ಆದರೂ‌ ಮತ್ತೆ ಮರೆತು ಹೋಗುತ್ತವೆ ಎಂದರು.
ಹಿರಿಯ ಪತ್ರಕರ್ತ ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿದರು. ರಿಯಾನಾ ಡಿಕೂನಾ ವಂದಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು