7:30 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ

09/09/2024, 20:03

ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ‌ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.
ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ ಆಭರಣಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ‌ಪುಸ್ತಕ‌ ಪರಿಚಯ ಮಾಡಿ ಮಾತನಾಡುತ್ತಿದ್ದರು.
ಪತ್ರಕರ್ತರ ಜೀವನ ಮತ್ತು ಸಾಹಿತಿ ಹಾಗೂ ಶಿಕ್ಷಕರ ಜೀವನ ಒಂದು ಪ್ರೆಶರ್ ನಲ್ಲಿ ಈಗ ಇದೆ. ಯಾವುದು ಬರೆಯಬೇಕು, ಹೇಳಬೇಕು, ಕಲಿಸಬೇಕು ಎಂದು ಹೇಳುವ ಒತ್ತಡ ಇಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮುಕ್ತವಾಗಿ ಮತ್ತು ಸರಳವಾಗಿ ಎಲ್ಲವೂ ಇದ್ದರೆ ಒಳ್ಳೆಯದು ಎಂಬುವ ಅಭಿಪ್ರಾಯ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ ಮಾಡಿದ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಸಾಹಿತ್ಯದ ಮಗ್ಗುಲುಗಳನ್ನು ಪತ್ರಕರ್ತರ ಜೀವನದ ಒಂದು ಅಂಶ ಅದನ್ನು ಮರೆಯದೆ ಬರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರು ತಮ್ಮ ಬೈಲೈನ್ ಆರ್ಟಿಕಲ್ಸ್ ಸಂಗ್ರಹಿಸಿ ಪುಸ್ತಕ ಪ್ರಕಟ ಮಾಡಬೇಕು. ಇಲ್ಲವಾದರೆ ನಾವು ಎಷ್ಟು ದೊಡ್ಡ ಪತ್ರಕರ್ತರು ಆದರೂ‌ ಮತ್ತೆ ಮರೆತು ಹೋಗುತ್ತವೆ ಎಂದರು.
ಹಿರಿಯ ಪತ್ರಕರ್ತ ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿದರು. ರಿಯಾನಾ ಡಿಕೂನಾ ವಂದಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು