3:21 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ

21/07/2022, 22:07

ಮಂಗಳೂರು(reporterkarnataka.com): ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿರುವ ಶಾಸಕ ಕಾಮತ್ ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಸೂಚನೆಯಿಂದ ತನಿಖೆಗೆ ಮತ್ತಷ್ಟು ಚುರುಕು ದೊರೆತಿದೆ. 

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದೂ ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಆ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ. 

ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು