7:08 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗೋ ಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

26/06/2023, 19:08

ಸುರತ್ಕಲ್(reporterkarnataka.com): ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂಧೆಯಾಗಿ ಬದಲಾಗುವ ಸಾಧ್ಯತೆಯಿದೆ.
ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು, ಈ ಕಾನೂನಿಂತೆ
ನಿಗಾ ವಹಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು ಶಾಸಕರು ಸರಕಾರ ಹಾಗೂ ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

ಗೋಕಳ್ಳತನ, ಅಕ್ರನ ಗೋಹತ್ಯೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ಜರಗಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಗೋ ಹತ್ಯೆಗೆ ಪ್ರೋತ್ಸಾಹ ಕೊಡುವಂತೆ ಹೇಳಿಕೆ ನೀಡುತ್ತಾ ಬರುತ್ತಿದ್ದು, ಗೋ ಕಳ್ಳತನ,ಅನಧಿಕೃತ ಗೋ ಹತ್ಯೆ ಹೆಚ್ಚಾದ ಪ್ರಕರಣ ಆದಲ್ಲಿ ಸಚಿವರದ್ದೇ ಕುಮ್ಮಕ್ಕು ಎಂದು ಎಂದು ಕಿಡಿಕಾರಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಕ್ರಮಗಳ ವಿರುದ್ದ ನನ್ನ ಕ್ಷೇತ್ರದಲ್ಲಿ ಆಸ್ತಿ ಮುಟ್ಟುಗೋಲು ಪ್ರಕರಣ ದಾಖಲಿಸಿದ್ದರಿಂದ ಬಹುತೇಕ ಅಕ್ರಮ ನಿಲ್ಲಿಸಲಾಗಿತ್ತು.ಗೋವು ಹಿಂದು ಸಮಾಜ ಪೂಜನೀಯ ಭಾವನೆಯಿಂದ ನೋಡುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು.ದ.ಕ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ‌ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು
ಬಿಜೆಪಿ ತಂದ ಕಾನೂನನ್ನು ಈಗಿನ ಸರಕಾರ ಮುಂದುವರಿಸಬೇಕೆಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು