11:17 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗೋ ಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

26/06/2023, 19:08

ಸುರತ್ಕಲ್(reporterkarnataka.com): ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂಧೆಯಾಗಿ ಬದಲಾಗುವ ಸಾಧ್ಯತೆಯಿದೆ.
ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು, ಈ ಕಾನೂನಿಂತೆ
ನಿಗಾ ವಹಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು ಶಾಸಕರು ಸರಕಾರ ಹಾಗೂ ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

ಗೋಕಳ್ಳತನ, ಅಕ್ರನ ಗೋಹತ್ಯೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ಜರಗಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಗೋ ಹತ್ಯೆಗೆ ಪ್ರೋತ್ಸಾಹ ಕೊಡುವಂತೆ ಹೇಳಿಕೆ ನೀಡುತ್ತಾ ಬರುತ್ತಿದ್ದು, ಗೋ ಕಳ್ಳತನ,ಅನಧಿಕೃತ ಗೋ ಹತ್ಯೆ ಹೆಚ್ಚಾದ ಪ್ರಕರಣ ಆದಲ್ಲಿ ಸಚಿವರದ್ದೇ ಕುಮ್ಮಕ್ಕು ಎಂದು ಎಂದು ಕಿಡಿಕಾರಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಕ್ರಮಗಳ ವಿರುದ್ದ ನನ್ನ ಕ್ಷೇತ್ರದಲ್ಲಿ ಆಸ್ತಿ ಮುಟ್ಟುಗೋಲು ಪ್ರಕರಣ ದಾಖಲಿಸಿದ್ದರಿಂದ ಬಹುತೇಕ ಅಕ್ರಮ ನಿಲ್ಲಿಸಲಾಗಿತ್ತು.ಗೋವು ಹಿಂದು ಸಮಾಜ ಪೂಜನೀಯ ಭಾವನೆಯಿಂದ ನೋಡುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು.ದ.ಕ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ‌ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು
ಬಿಜೆಪಿ ತಂದ ಕಾನೂನನ್ನು ಈಗಿನ ಸರಕಾರ ಮುಂದುವರಿಸಬೇಕೆಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು