7:48 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಗೋವಾ: 28ರಂದು ಬಿಜೆಪಿ ನೇತೃತ್ವದ ನೂತನ ಸರಕಾರ ಪ್ರತಿಜ್ಞೆ ಸ್ವೀಕಾರ: ಸಾವಂತ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ

24/03/2022, 09:19

ಪಣಜಿ(reporterkarnataka.com);

ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದ್ದು, ಮಾರ್ಚ್ 28ರಂದು ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಫಲಿತಾಂಶ ಬಂದು ಸುಮಾರು 15 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ ಪಣಜಿಗೆ ಆಗಮಿಸಿದ್ದರು. ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದರು. ಹಾಗೆ ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು