2:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು

10/03/2022, 12:23

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ.

ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ. ಗೋವಾದಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ನ ಏಕೈಕ ಆಶಾಕಿರಣ ಕೂಡ ಇದೇ ಪುಟ್ಟ ರಾಜ್ಯವಾಗಿತ್ತು. ಆದರೆ ಇತ್ತೀಚಿಗಿನ ಫಲಿತಾಂಶ ಪ್ರಕಾರ ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ  20 ಸ್ಥಾನಗಳನ್ನು ಪಡೆದಿದೆ. ಒಬ್ಬರ ಬೆಂಬಲ ದೊರೆತರೆ ಬಿಜೆಪಿಗೆ ಇಲ್ಲಿ ಸರಳ ಬಹುಮತ ದೊರೆತಂತಾಗುತ್ತದೆ. ಗೋವಾದಲ್ಲಿ 3 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇವರ ಬೆಂಬಲ ಬಿಜೆಪಿಗೆ ಸಿಗುವ ಎಲ್ಲ ಸಾಧ್ಯತೆಗಳಿವೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು