3:24 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಗೋವಾ: ಅಕ್ಟೋಬರ್ 26 ಮತ್ತು 27ರಂದು ಅಖಿಲ ಭಾರತ ಕೊಂಕಣಿ ಪರಿಷದ್‌ 33ನೇ ಅಧಿವೇಶನ

07/10/2024, 12:05

ಮಂಗಳೂರು(reporterkarnataka.com): ಅಖಿಲ ಭಾರತ ಕೊಂಕಣಿ ಪರಿಷದ್‌ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ.
ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿಸಲಿದ್ದಾರೆ‌ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪರಿಷದಿನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಪ್ರಶಾಂತ್ ನಾಯಕ್ ಅವರು ತಿಳಿಸಿದರು.


ಪರಿಷದ್‌ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು ಒಳಗೊಂಡ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪರಿಷದಿಗೆ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗೋವಾದಿಂದ ಪ್ರತಿನಿಧಿಗಳು ಹಾಜರಾಗಲಿದ್ದಾರೆ. ರೆ। ಮೌಝಿನೋ ಅತ್ತೈಡೆ ಅವರು ಪರಿಷದಿನ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಎರಡು ವರ್ಷಗಳ ಕಾಲ ಈ ಹುದ್ದೆಯನ್ನು ಹೊಂದಿರುತ್ತಾರೆ. ಕೊಂಕಣಿ ಭಾಷಾ ಮಂಡಳದ ಮಾಜಿ ಅಧ್ಯಕ್ಷ ಪ್ರಶಾಂತ್ ನಾಯಕ್ ಅವರು ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದಾರೆ ಮತ್ತು ಅನಂತ ಅಗ್ನಿ, ಮಂಗಲ್‌ದಾಸ್ ಭಟ್ ಅವರು ಸಂಘಟನಾ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿದ್ದಾರೆ.
ಪರಿಷ್ ನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ, ಪ್ರಶಾಂತ್ ನಾಯಕ್ ಮತ್ತು ಸುದೀನ್ ಲೊಲಿಯೇಕರ್ ಅವರನ್ನು ಒಳಗೊಂಡ ಪ್ರತಿನಿಧಿಗಳು ಪರಿಷದಿಗೆ ಪ್ರತಿನಿಧಿಗಳನ್ನು ಆರಿಸುವ ಸಲುವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
1939ರಲ್ಲಿ ಸ್ವರ್ಗೀಯ ಮಾಧವ ಮಂಜುನಾಥ ಶಾನುಭಾಗ್ ಅವರು ಸ್ಥಾಪಿಸಿದ ಪರಿಷದ್ ಕೊಂಕಣಿ ಭಾಷೆ ಮತ್ತು ಅದರ ಜನರ ಅಭಿವೃದ್ಧಿಯತ್ತ ಕಾರ್ಯನಿರ್ವಹಿಸುತ್ತಿದೆ. ಆಯೋಜಕರು ಕರ್ನಾಟಕದ ಕೊಂಕಣಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರಿಷದಿಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ನಾಯಕ್ ( ಅಧ್ಯಕ್ಷರು, ಸ್ವಾಗತ ಸಮಿತಿ, ಅಖಿಲ ಭಾರತ ಕೊಂಕಣಿ ಪರಿಷದ್),ಚೇತನ್ ಅಚಾರ್ಯ (ಕಾರ್ಯಾಧ್ಯಕ್ಷರು, ಅಖಿಲ ಭಾರತ ಕೊಂಕಣಿ ಪರಿಷದ್),ಡಾ| ಕಸ್ತೂರಿ ಮೋಹನ್ ಪೈ , ಎಚ್. ಎಮ್. ಪರ‍್ನಾಲ್ , ಟೈಟಸ್ ನೊರೊನ್ಹಾ , ಮೆಲ್ವಿನ್ ರೊಡ್ರಿಗಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು