4:56 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್  ಆಯ್ಕೆ

22/03/2022, 16:15

ಪಣಜಿ(reporterkarnataka.com);

ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ

ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ

ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಇದರಿಂದ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ

ಪಣಜಿಗೆ ಆಗಮಿಸಿದ್ದರು. ಇದೀಗ ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ

ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದಾರೆ. ಹಾಗೆ

ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು