3:56 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್  ಆಯ್ಕೆ

22/03/2022, 16:15

ಪಣಜಿ(reporterkarnataka.com);

ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ

ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ

ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಇದರಿಂದ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ

ಪಣಜಿಗೆ ಆಗಮಿಸಿದ್ದರು. ಇದೀಗ ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ

ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದಾರೆ. ಹಾಗೆ

ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು