9:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗೋವಾದಲ್ಲಿ ಕಾರ್ಕಳದ ಯೋಗಪಟು ಕವನ ಆಚಾರ್ಯ ಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

03/07/2023, 12:36

ಉಡುಪಿ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕವನ ಆಚಾರ್ಯ ಅವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು